ಬ್ರೇಕಿಂಗ್ ನ್ಯೂಸ್
11-01-24 11:44 am Bangalore Correspondent ಕ್ರೈಂ
ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ.
ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ.

ಕಪಾಟಿನಲ್ಲಿರಿಸಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ ಬಂಗಾರದ ಒಡವೆಗಳು, 30 ಸಾವಿರ ರೂ. ನಗದು ಹಾಗೂ ಒಂದು ಮೊಬೈಲ್ ಫೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.
ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
House robbery in Bantwal mangalore, Mother daughter tied up, looted of gold and cash.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm