ಬ್ರೇಕಿಂಗ್ ನ್ಯೂಸ್
12-01-24 01:51 pm Mangalore Correspondent ಕ್ರೈಂ
ಪುತ್ತೂರು, ಜ.12: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾದ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ವೇಳೆ ಸುಟ್ಟು ಹಾಕಿದ ಕೃತ್ಯ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿದಾಗ, ಈ ವಿಚಾರ ಬಯಲಾಗಿದೆ. ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಈ ರೀತಿ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ಏಕಮುಖವಾಗಿ ಪ್ರೀತಿಸಿದ್ದ ಎನ್ನಲಾಗಿದೆ. ಯುವತಿಗೆ ಜನವರಿ 3ರಂದು ಬೇರೊಬ್ಬ ಯುವಕನೊಂದಿಗೆ ವಿವಾಹವಾಗಿದ್ದು ಆಕೆಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜನವರಿ 6ರಂದು ಗಂಡನ ಜೊತೆ ತವರಿಗೆ ಬಂದಿದ್ದಳು. ರಾತ್ರಿ ವೇಳೆ ಮನೆಯ ಸಮೀಪ ಇರಿಸಿದ್ದ ಬೈಕಿಗೆ ಬೆಂಕಿ ಹಚ್ಚಲಾಗಿತ್ತು. ಬೈಕ್ ಹೊತ್ತಿ ಉರಿಯುತ್ತಿದ್ದುದನ್ನು ಸಂಬಂಧಿಕರು ಗಮನಿಸಿದ್ದರು. ಬೈಕನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ದ್ವೇಷದಿಂದ ಬೈಕ್ ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman in Puttur district burnt the bike belonging to the groom at night in uppinangady police limits. The matter came to light when the police investigated the case of setting fire to a two-wheeler registered at Uppinangady police station. The accused has been identified as Sandeep, a resident of Ninnikallu Padala in Uppinangady village.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am