ಬ್ರೇಕಿಂಗ್ ನ್ಯೂಸ್
12-01-24 01:51 pm Mangalore Correspondent ಕ್ರೈಂ
ಪುತ್ತೂರು, ಜ.12: ತಾನು ಪ್ರೀತಿಸಿದ ಯುವತಿ ಬೇರೆ ಮದುವೆಯಾದ ಸಿಟ್ಟಿನಲ್ಲಿ ವರನಿಗೆ ಸೇರಿದ ಬೈಕನ್ನು ರಾತ್ರಿ ವೇಳೆ ಸುಟ್ಟು ಹಾಕಿದ ಕೃತ್ಯ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿದಾಗ, ಈ ವಿಚಾರ ಬಯಲಾಗಿದೆ. ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಈ ರೀತಿ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ಏಕಮುಖವಾಗಿ ಪ್ರೀತಿಸಿದ್ದ ಎನ್ನಲಾಗಿದೆ. ಯುವತಿಗೆ ಜನವರಿ 3ರಂದು ಬೇರೊಬ್ಬ ಯುವಕನೊಂದಿಗೆ ವಿವಾಹವಾಗಿದ್ದು ಆಕೆಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜನವರಿ 6ರಂದು ಗಂಡನ ಜೊತೆ ತವರಿಗೆ ಬಂದಿದ್ದಳು. ರಾತ್ರಿ ವೇಳೆ ಮನೆಯ ಸಮೀಪ ಇರಿಸಿದ್ದ ಬೈಕಿಗೆ ಬೆಂಕಿ ಹಚ್ಚಲಾಗಿತ್ತು. ಬೈಕ್ ಹೊತ್ತಿ ಉರಿಯುತ್ತಿದ್ದುದನ್ನು ಸಂಬಂಧಿಕರು ಗಮನಿಸಿದ್ದರು. ಬೈಕನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ದ್ವೇಷದಿಂದ ಬೈಕ್ ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman in Puttur district burnt the bike belonging to the groom at night in uppinangady police limits. The matter came to light when the police investigated the case of setting fire to a two-wheeler registered at Uppinangady police station. The accused has been identified as Sandeep, a resident of Ninnikallu Padala in Uppinangady village.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm