ಬ್ರೇಕಿಂಗ್ ನ್ಯೂಸ್
12-01-24 04:26 pm HK News Desk ಕ್ರೈಂ
ಬೆಂಗಳೂರು, ಜ 12: ಉದ್ಯಮಿಯನ್ನು ಅಪಹರಿಸಿ, ಬೆದರಿಸಿ ಹಣ ಸುಲಿಗೆ ಮಾಡಿದ್ದ ಆರೋಪದಡಿ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ಸೇರಿದಂತೆ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಚಿನ್ ಹಾಗೂ ಗೌರಿಶಂಕರ್ ಬಂಧಿತರು.
ಜನವರಿ 5ರಂದು ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯಿಂದ ಉದ್ಯಮಿ ಚೇತನ್ ಶಾ ಎಂಬವರನ್ನು ಅಪಹರಿಸಿದ್ದ ಆರೋಪಿಗಳು, 7 ಲಕ್ಷ ರೂ ವಸೂಲಿ ಮಾಡಿದ್ದರು. ಬಳಿಕ ತಾನೇ ಹಣ ಕೊಡುತ್ತಿರುವುದಾಗಿ ಚೇತನ್ ಶಾರಿಂದ ಸ್ವಯಂ ಹೇಳಿಕೆ ಕೊಡಿಸಿ, ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬಿಟ್ಟು ಪರಾರಿಯಾಗಿದ್ದರು.
ಚೇತನ್ ಶಾ ಅವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾ ಅವರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಸಚಿನ್, ತನಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪರಿಚಯದವರಿದ್ದಾರೆ, ತಾನೇ ಸೀಟು ಕೊಡಿಸುತ್ತೇನೆ ಎಂದಿದ್ದನಂತೆ.
ಇದಕ್ಕೆ ಪ್ರತಿಯಾಗಿ 4 ಲಕ್ಷ ರೂ ಹಣ ಕೇಳಿದ್ದಾನೆ. ಆದರೆ ಸೀಟು ಕೊಡಿಸದೇ ವಿಳಂಬ ಮಾಡಿದ್ದರಿಂದ ಬೇರೊಬ್ಬರ ಸಹಾಯದ ಮೂಲಕ ಚೇತನ್ ಶಾ ತಮ್ಮ ಮಗಳಿಗೆ ಸೀಟು ಪಡೆದುಕೊಂಡಿದ್ದರು. ಕಳೆದ ಮೇ ತಿಂಗಳಿನಲ್ಲಿ ಚೇತನ್ ಶಾರನ್ನು ಭೇಟಿಯಾಗಿದ್ದ ಸಚಿನ್, ನಿಮ್ಮ ಮಗಳಿಗೆ ಸೀಟು ಕೊಡಿಸಿದ್ದು ನಾನೇ, ನನಗೆ 4 ಲಕ್ಷ ರೂ ಕೊಡಬೇಕು ಎಂದು ಒತ್ತಾಯಿಸಿದ್ದಾನೆ. ಆದರೆ ಹಣ ಕೊಡಲು ಚೇತನ್ ಶಾ ಒಪ್ಪಿರಲಿಲ್ಲ. ಆ ಸಂದರ್ಭದಲ್ಲಿ ಬೆದರಿಕೆ ಹಾಕಿದ್ದ ಸಚಿನ್, ನಂತರದಲ್ಲೂ ಸಹ ಬೇರೆ ಬೇರೆ ವ್ಯಕ್ತಿಗಳಿಂದ ಬೆದರಿಕೆ ಕರೆ ಮಾಡಿಸಿದ್ದಾನೆ.
ಜನವರಿ 5ರಂದು ಪೀಣ್ಯದಲ್ಲಿರುವ ತಮ್ಮ ಇಂಡಸ್ಟ್ರಿಯಿಂದ ಮನೆಗೆ ತೆರಳುತ್ತಿದ್ದಾಗ ರಾಜಾಜಿನಗರ ರಸ್ತೆಯ ಸಿಗ್ನಲ್ ಬಳಿ ಆಟೋದಲ್ಲಿ ಬಂದು ಚೇತನ್ ಶಾರ ಕಾರು ಅಡ್ಡಗಟ್ಟಿದ್ದ ಸಚಿನ್ ಮತ್ತು ಆತನ ಸ್ನೇಹಿತರು, ಅವರದ್ದೇ ಕಾರಿನಲ್ಲಿ ಅಪಹರಿಸಿ ರಸ್ತೆಯಲ್ಲೆಲ್ಲ ಸುತ್ತಾಡಿಸಿದ್ದರು. ಸೀಟು ಕೊಡಿಸಿದ್ದಕ್ಕಾಗಿ 4 ಲಕ್ಷ ರೂ, ಬಡ್ಡಿ 2 ಲಕ್ಷ ರೂ. ಹಾಗೂ ತನ್ನ ಹುಡುಗರಿಗೆ 1 ಲಕ್ಷ ರೂ., ಒಟ್ಟು 7 ಲಕ್ಷ ರೂ. ಕೊಡುವಂತೆ ಸಚಿನ್ ಬೆದರಿಕೆ ಹಾಕಿದ್ದ. ಈ ವೇಳೆ ಚೇತನ್ ಮನೆಗೆ ಓರ್ವ ಆರೋಪಿಯನ್ನು ಕಳುಹಿಸಿ, ಆತನ ಹೆಂಡತಿಯ ಬಳಿಯಿಂದ 7 ಲಕ್ಷ ರೂ. ಹಣ ಪಡೆದಿದ್ದ ಆರೋಪಿಗಳು, ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾರನ್ನು ಬಿಟ್ಟು ಕಳುಹಿಸಿದ್ದರು. ಇದಾದ ಬಳಿಕ ಚೇತನ್ ಶಾ ರಾಜಾಜಿನಗರ ಠಾಣೆಗೆ ದೂರು ನೀಡಿದ್ದರು.
Rajajinagar police have arrested two persons, including a youth, who were preparing for the UPSC exams, for allegedly abducting, threatening and extorting money from a businessman. Sachin and Gaurishankar have been arrested.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am