ಬ್ರೇಕಿಂಗ್ ನ್ಯೂಸ್
17-01-24 12:51 pm Udupi Correspondent ಕ್ರೈಂ
ಉಡುಪಿ, ಜ.17: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
The Udupi Additional District POCSO Special Court has sentenced a man to 20 years rigorous imprisonment for raping a minor girl and making her pregnant.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm