ಬ್ರೇಕಿಂಗ್ ನ್ಯೂಸ್
17-01-24 12:51 pm Udupi Correspondent ಕ್ರೈಂ
ಉಡುಪಿ, ಜ.17: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
The Udupi Additional District POCSO Special Court has sentenced a man to 20 years rigorous imprisonment for raping a minor girl and making her pregnant.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am