ಬ್ರೇಕಿಂಗ್ ನ್ಯೂಸ್
17-01-24 12:51 pm Udupi Correspondent ಕ್ರೈಂ
ಉಡುಪಿ, ಜ.17: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
The Udupi Additional District POCSO Special Court has sentenced a man to 20 years rigorous imprisonment for raping a minor girl and making her pregnant.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm