ಬ್ರೇಕಿಂಗ್ ನ್ಯೂಸ್
17-01-24 12:51 pm Udupi Correspondent ಕ್ರೈಂ
ಉಡುಪಿ, ಜ.17: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
The Udupi Additional District POCSO Special Court has sentenced a man to 20 years rigorous imprisonment for raping a minor girl and making her pregnant.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm