ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am