ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm