ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm