ಬ್ರೇಕಿಂಗ್ ನ್ಯೂಸ್
18-01-24 04:32 pm Mangalore Correspondent ಕ್ರೈಂ
ಉಳ್ಳಾಲ, ಜ.18: ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ, ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.
ಉಳ್ಳಾಲ ಕೋಟೆಪುರದ ಬರಾಖ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ಧನ್ಯ ನಾಯಕ್ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿದ್ದ ಗ್ಯಾಸ್ ಸಿಲಿಂಡರ್ ಮತ್ತು ಸುಮಾರು 280 ಲೀಟರ್ ಪೆಟ್ರೋಲನ್ನ ಜಪ್ತಿಗೊಳಿಸಿದ್ದು ಆರೋಪಿ ಅಬ್ದುಲ್ ಅಲ್ತಾಫ್ (49) ಎಂಬಾತನನ್ನ ಬಂಧಿಸಿದೆ.
ಕೋಟೆಪುರದ ರಸ್ತೆ ಬದಿಯ ಮನೆಯಲ್ಲೇ ತೋರ್ಪಡಿಕೆಗೆ ಗುಜರಿ ಅಂಗಡಿ ನಡೆಸುತ್ತಿದ್ದ ಆರೋಪಿ ಅಲ್ತಾಫ್ ಮನೆಯೊಳಗಿನ ವಿಶಾಲ ಪ್ರದೇಶದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಗಳನ್ನ ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಇಷ್ಟಲ್ಲದೆ ಸ್ಥಳೀಯ ನಾಡ ದೋಣಿಗಾರರಿಗೆ ದುಪ್ಪಟ್ಟು ದರದಲ್ಲಿ ಪೆಟ್ರೋಲನ್ನ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿಯನ್ವಯ ಎಸಿಪಿ ಧನ್ಯ ನಾಯಕ್ ಸಮೇತ ಸಿಬ್ಬಂದಿಗಳಾದ ರಿಜಿ, ಸಾಜು ನಾಯರ್, ಮಹೇಶ್, ಅಕ್ಬರ್ ನೇತೃತ್ವದ ತಂಡ ಗುರುವಾರ ದಿಢೀರ್ ದಾಳಿ ನಡೆಸಿದೆ. ಸುಮಾರು 55 ಕ್ಕೂ ಮಿಕ್ಕಿದ ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್ ನಷ್ಟು ಅಕ್ರಮ ದಾಸ್ತಾನು ಇರಿಸಿದ್ದ ಪೆಟ್ರೋಲನ್ನ ವಶ ಪಡಿಸಿದ್ದು ,ಆರೋಪಿ ಅಲ್ತಾಪ್ ನನ್ನು ಬಂಧಿಸಿದ್ದಾರೆ.
ತಮ್ಮ ಠಾಣೆಯ ಕೂಗಳತೆಯಲ್ಲಿ ರಸ್ತೆ ಬದಿಯಲ್ಲೇ ನಡೆಯುತ್ತಿರುವ ಅಕ್ರಮಗಳು ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಅವರ ಆಪ್ತ ಸಲಹೆಗಾರರಿಗೆ ತಿಳಿಯದ ಸಂಗತಿ ಏನೂ ಅಲ್ಲ. ಎಲ್ಲವೂ ತಿಳಿದು ಪಾಲಿಗೆ ಬಂದದನ್ನ ಪಂಚಾಮೃತವನ್ನಾಗಿ ಸ್ವೀಕರಿಸುತ್ತಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಅವರ ಗುಪ್ತ ಮಾಹಿತಿದಾರರು ಇಂದಿನ ಎಸಿಪಿ ದಾಳಿಯಿಂದ ದಂಗಾಗಿ ಕರಟಿದ ಮುಖದಿಂದ ದಾಳಿಯ ಗುಂಪಿನ ಫೋಟೋಕ್ಕೆ ಪೋಸು ನೀಡಿದ್ದಾರೆ.
Mangalore ACP Dhanya N Nayak and team raids Illegal gas refilling hub at Kotepura in Ullal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm