ಬ್ರೇಕಿಂಗ್ ನ್ಯೂಸ್
20-01-24 05:20 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್ನಿಂದ ಸಾಲ ಪಡೆಯಲು ಏಜೆಂಟ್ಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ವಿವಿಧ ಬ್ಯಾಂಕ್ಗಳ ನಾಲ್ವರು ವ್ಯವಸ್ಥಾಪಕರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ್, ಮುರಳೀಧರ್, ಶಶಿಕಾಂತ್, ರಾಕೇಶ್ ಬಂಧಿತರು.
ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್ನಿಂದ ಸಾಲ ಪಡೆಯುತ್ತಿದ್ದ ಏಜೆಂಟ್ಗಳ ವಿರುದ್ಧ ಪುಟ್ಟೇನಹಳ್ಳಿ ಹಾಗೂ ಹುಳಿಮಾವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿತ್ತು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಐವರು ಏಜೆಂಟರುಗಳನ್ನು ವಿಚಾರಣೆ ನಡೆಸಿದಾಗ ಏಜೆಂಟರಿಗೆ ಸಾಲ ಪಡೆಯಲು ನೆರವಾಗುತ್ತಿದ್ದ ನಾಲ್ವರು ಬ್ಯಾಂಕ್ ಅಧಿಕಾರಿಗಳ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ಮಾಡಿ ಇದುವರೆಗೆ ಎಷ್ಟು ಪ್ರಮಾಣದಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಒಂಟಿ ವೃದ್ಧರ ಹೆಸರಿನಲ್ಲಿರುವ ನಿವೇಶನ ಅಥವಾ ಮನೆ ಖರೀದಿಸುವ ನೆಪ ಮಾಡಿಕೊಂಡು ಬಂಧಿತ ಏಜೆಂಟರುಗಳು ನಕಲಿ ದಾಖಲೆ ಸೃಷ್ಟಿಸುತ್ತಿದ್ದರು. ನಂತರ ಬ್ಯಾಂಕ್ ಅಧಿಕಾರಿಗಳ ಮುಂದೆ ಅಸಲಿ ದಾಖಲೆಯೆಂದು ನಂಬಿಸಿ ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದರು. ಬ್ಯಾಂಕ್ ಅಧಿಕಾರಿಗಳು ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸದೇ ಸಾಲ ನೀಡುತ್ತಿದ್ದರು. ಏಜೆಂಟರ ಆಮೀಷಕ್ಕೊಳಗಾಗಿ ಬ್ಯಾಂಕ್ ಅಧಿಕಾರಿಗಳೂ ಅವರಿಗೆ ಸಾಲ ನೀಡಲು ಸಹಕರಿಸುತ್ತಿದ್ದರು
ಹುಳಿಮಾವಿನಲ್ಲಿ ವೃದ್ಧೆಯೊಬ್ಬರ ಮನೆಯ ದಾಖಲೆ ಬಳಸಿಕೊಂಡು ಆರೋಪಿ ಏಜೆಂಟ್ ಗಳು ಬ್ಯಾಂಕ್ಗಳಿಂದ 1.50 ಕೋಟಿ ರೂ. ಸಾಲ ಪಡೆದಿದ್ದರು. ಮತ್ತೂಂದು ಪ್ರಕರಣದಲ್ಲಿ ಪುಟ್ಟೇನಹಳ್ಳಿಯಲ್ಲಿ ವೃದ್ಧೆಯೊಬ್ಬರ ಮನೆಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿ 3.85 ಕೋಟಿ ರೂ. ಸಾಲ ಪಡೆದಿದ್ದರು. ಹುಳಿಮಾವು ನಿವಾಸಿ ಅಂಡಾಳ್ ಕುಪ್ಪಣ್ಣ (85) ಎಂಬುವವರ ಮನೆ ಖರೀದಿಸುವ ನೆಪದಲ್ಲಿ ದಾಖಲೆ ಪಡೆದು ಬ್ಯಾಂಕ್ಗೆ ಸಲ್ಲಿಸಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. 2023ರ ಡಿಸೆಂಬರ್ನಲ್ಲಿ ಏಜೆಂಟರುಗಳ ಕಳ್ಳಾಟದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಪ್ರಕರಣವು ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಏಜೆಂಟರಾದ ಭಾಸ್ಕರ್ ಕೃಷ್ಣ, ಮಹೇಶ್, ಅರುಣ್, ದಿವಾಕರ್ ಅವರನ್ನು ಬಂಧಿಸಿದ್ದರು.
The CCB police have arrested four managers of various banks for allegedly assisting agents in obtaining loans from banks by creating fake documents.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am