ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm