ಬ್ರೇಕಿಂಗ್ ನ್ಯೂಸ್
21-01-24 07:12 pm Udupi Correspondent ಕ್ರೈಂ
ಉಡುಪಿ, ಜ.21: ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿಯ ವಿರುದ್ಧ ಆನ್ಲೈನ್ ದೂರು ನೀಡಲು ಹೋದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದಲೇ ಲಕ್ಷಾಂತರ ರೂಪಾಯಿ ಹಣ ಕಳಕೊಂಡ ಪ್ರಸಂಗ ನಡೆದಿದೆ.
ಉಡುಪಿ ಸಂತೆಕಟ್ಟೆಯ ರವಿರಾಜ್ ಎಂಬವರು ಇಲೆಕ್ಟ್ರಿಕ್ ವಾಹನ ಖರೀದಿಸಲು ಬುಕ್ಕಿಂಗ್ ಮಾಡಿಸಿದ್ದರು. ಆದರೆ ಸ್ಕೂಟರ್ ಪೂರೈಕೆಯಾಗದ ಸಿಟ್ಟಿನಲ್ಲಿ ಕಂಪೆನಿಯ ವಿರುದ್ಧ ದೂರು ನೀಡಲು ಜ.15ರಂದು ಗೂಗಲ್ ಸರ್ಚ್ ಮಾಡಿದ್ದರು. ಅದರಲ್ಲಿ ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದ್ದರಿಂದ ಅದನ್ನು ಅನುಸರಿಸಿದ್ದರು.
ಅಲ್ಲಿ ವಿಷಯ ನಮೂದಿಸಿದ ಕೆಲವೇ ಕ್ಷಣಗಳಲ್ಲಿ ಮೆಸೇಜ್ ಬಂದಿತ್ತು. ನಿಮ್ಮ ದೂರನ್ನು ಸ್ವೀಕರಿಸಲಾಗಿದೆ. ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಲಿಂಕ್ಗೆ ಮಾಹಿತಿಗಳನ್ನು ನಮೂದಿಸಿ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದರು. ಅದರಂತೆ ರವಿರಾಜ್ ತಾನು ಬುಕ್ಕಿಂಗ್ ಸಂದರ್ಭದಲ್ಲಿ ನೀಡಿದ್ದ ಹಣಕಾಸು ಸೇರಿದಂತೆ ಬ್ಯಾಂಕ್ ಮಾಹಿತಿ ಹಾಗೂ ಯುಪಿಐ ಸಂಖ್ಯೆಯನ್ನು ನಮೂದಿಸಿದ್ದರು. ಬಳಿಕ ಅವರ ಗಮನಕ್ಕೆ ಬರದಂತೆ ಬ್ಯಾಂಕ್ ಖಾತೆಯಿಂದ ಜ.20ರಂದು ಹಂತ ಹಂತವಾಗಿ 1,99,000 ರೂ. ಕಡಿತಗೊಂಡಿತ್ತು. ಅತ್ತ ಸ್ಕೂಟರ್ ಕೂಡ ಇಲ್ಲ, ಇತ್ತ ಬ್ಯಾಂಕ್ನಲ್ಲಿದ್ದ ಹಣವೂ ಇಲ್ಲ ಎಂಬ ಸ್ಥಿತಿ ಅವರದ್ದಾಗಿದೆ. ಈ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ರವಿರಾಜ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
A man, who had gone to lodge an online complaint against an electric scooter for not being delivered despite booking it, lost lakhs of rupees from his bank account.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm