ಬ್ರೇಕಿಂಗ್ ನ್ಯೂಸ್
22-11-20 12:15 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯ ಭರ್ಜರಿ ಗಿಫ್ಟ್ ಆಸೆಗೆ ಒಳಗಾದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ವ್ಯಕ್ತಿಗೆ ರಿಯನಾರ್ಡೊ ನೀಲ್ ಹೆಸರಿನ ವ್ಯಕ್ತಿಯೊಬ್ಬ ಇತ್ತೀಚೆಗೆ ಫೇಸ್ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಪರಿಚಯವಾಗಿದ್ದ. ಬಳಿಕ ಮೊಬೈಲ್ ನಂಬರ್ ಪಡೆದು ಇಂಟರ್ನೆಟ್ ಮುಖಾಂತರ ಸಂಪರ್ಕದಲ್ಲಿದ್ದು ಪರಿಚಯದಿಂದ ಮಾತಾಡಿಕೊಂಡಿದ್ದ. ಆದರೆ ಕೆಲ ದಿನಗಳ ಹಿಂದೆ ಯಾವುದೋ ಕಾರಣಕ್ಕೆ ನಾನು ನಿಮಗೆ ಭರ್ಜರಿ ಗಿಫ್ಟ್ ಕಳುಹಿಸುವುದಾಗಿ ರಿಯನಾರ್ಡೊ ನೀಲ್ ಹೆಸರಿನ ಗೆಳೆಯ ತಿಳಿಸಿದ್ದ. ಆರಂಭದಲ್ಲಿ ನಿರಾಕರಿಸಿದ್ದ ವ್ಯಕ್ತಿ, ಕೊನೆಗೆ ಆತನ ಒತ್ತಾಯಕ್ಕೆ ಮಣಿದು 'ಓಕೆ' ಎಂದಿದ್ದರು.

ಅದಾದ ಕೆಲವೇ ದಿನದಲ್ಲಿ ದೆಹಲಿಯಿಂದ ಮಹಿಳೆಯೊಬ್ಬಳು ಕರೆ ಮಾಡಿದ್ದಾಳೆ. ಕೊರಿಯರ್ ಆಫೀಸ್ನಿಂದ ಕರೆ ಮಾಡಿದ್ದು , ಪಾರ್ಸೆಲ್ ಮೊತ್ತ 32,800 ರೂ. ಪಾವತಿ ಮಾಡುವಂತೆ ತಿಳಿಸಿದ್ದು ಅದನ್ನು ಪೇ ಮಾಡಿದ್ದಾರೆ. ಅದಾದ ಕೆಲವೇ ಕ್ಷಣದಲ್ಲಿ ದೆಹಲಿ ಕಸ್ಟಮ್ಸ್ ಇಲಾಖೆಯಿಂದ ಅಂತ ಹೆಸರೇಳಿಕೊಂಡು ಮತ್ತೊಬ್ಬ ಮಹಿಳೆ ಕರೆ ಮಾಡಿದ್ದು ಜಿಎಸ್ ಟಿ, ಕಸ್ಟಮ್ಸ್ ಫೀಸ್, ಇತರ ವೆಚ್ಚದ ಬಗ್ಗೆ ಮಾತನಾಡಿದ್ದಾಳೆ. ಬೇರೆ ಬೇರೆ ಖಾತೆಗಳ ವಿವರ ನೀಡಿದ್ದು ಅದಕ್ಕೆ ಹಣ ಪಾವತಿ ಮಾಡುವಂತೆ ಕೇಳಿಕೊಂಡಿದ್ದಾಳೆ. ಆಕೆಯ ಒತ್ತಾಯಕ್ಕೆ ಕಟ್ಟುಬಿದ್ದ ವ್ಯಕ್ತಿ ಭಾರೀ ದೊಡ್ಡ ಗಿಫ್ಟ್ ಬರುವ ನಿರೀಕ್ಷೆಯಲ್ಲಿ ವಿವಿಧ ಖಾತೆಗಳಿಗೆ 14,91,840 ರೂ. ಜಮೆ ಮಾಡಿದ್ದಾರೆ.
ಆದರೆ, ಇದಾದ ನಂತರ ಅವರ ಸಂಪರ್ಕವೇ ಕಡಿತಗೊಂಡಿದ್ದು, ವ್ಯಕ್ತಿಗೆ ಮೋಸ ಹೋಗಿರುವ ಸಂಶಯ ಬಂದಿದೆ. ಲೆಕ್ಕ ಹಾಕಿದಾಗ ಲಕ್ಷಾಂತರ ರೂಪಾಯಿ ಕಳಕೊಂಡಿದ್ದು ಅರಿವಿಗೆ ಬಂದಿದೆ. ಇದೊಂದು ವಂಚನೆಯ ಜಾಲ ಅನ್ನೋದು ಗೊತ್ತಾಗಿ, ಇದೀಗ ಮೋಸ ಹೋದ ವ್ಯಕ್ತಿ ಮಂಗಳೂರಿನ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.
Man lost Rs 14,91,840 lakh to a Facebook friend who lured him with gifts worth lakhs of rupees. A case has been registered at the cyber crime police station in Mangalore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm