ಬ್ರೇಕಿಂಗ್ ನ್ಯೂಸ್
24-01-24 06:18 pm HK News Desk ಕ್ರೈಂ
ಮೈಸೂರು, ಜ 24: ಹೆತ್ತ ತಾಯಿ ಹಾಗೂ ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಸ್ವಂತ ಮಗನಿಂದಲೇ ಕೃತ್ಯ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರವಾಗಿ ತಂಗಿಯೊಂದಿಗೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ನಿತಿನ್ ಈ ಕೃತ್ಯ ಎಸಗಿದ್ದಾನೆ. ಆರೋಪಿಯು ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದ. ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತರು.

ಹನಗೋಡು ಗ್ರಾಮದ ಬೇರೆ ಯುವಕನೊಂದಿಗಿನ ಪ್ರೀತಿ ವಿಚಾರವಾಗಿ ಅಣ್ಣ-ತಂಗಿ ಮಧ್ಯೆ ವೈಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು. ನಾವೇ ಹಲವು ಬಾರಿ ಸಮಾಧಾನಪಡಿಸಿದ್ದೆವು. ಮಂಗಳವಾರ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ನಲ್ಲಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ತಂದೆ ಸತೀಶ್ ಹೇಳಿದ್ದಾರೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಸತೀಶ್ ತಿಳಿಸಿದ್ದಾರೆ.
ಘಟನೆ ಬಳಿಕ ಪಶ್ಚಾತ್ತಾಪ ಪಟ್ಟು ತಾಯಿಯನ್ನು ರಕ್ಷಿಸಲು ನಿತಿನ್ ಕೆರೆಗೆ ಹಾರಿದ್ದಾನೆ. ಆದ್ರೆ, ಅಷ್ಟರಲ್ಲಾಗಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಆರೋಪಿ ನಿತಿನ್ನನ್ನು ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
In a shocking incident, a mother and her sister were allegedly pushed into a lake and murdered at Marur village in Hunsur taluk on Jan. 24. The crime was committed by his own son. The accused has been arrested by the police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am