ಬ್ರೇಕಿಂಗ್ ನ್ಯೂಸ್
24-01-24 06:18 pm HK News Desk ಕ್ರೈಂ
ಮೈಸೂರು, ಜ 24: ಹೆತ್ತ ತಾಯಿ ಹಾಗೂ ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಸ್ವಂತ ಮಗನಿಂದಲೇ ಕೃತ್ಯ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರವಾಗಿ ತಂಗಿಯೊಂದಿಗೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ನಿತಿನ್ ಈ ಕೃತ್ಯ ಎಸಗಿದ್ದಾನೆ. ಆರೋಪಿಯು ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದ. ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತರು.
ಹನಗೋಡು ಗ್ರಾಮದ ಬೇರೆ ಯುವಕನೊಂದಿಗಿನ ಪ್ರೀತಿ ವಿಚಾರವಾಗಿ ಅಣ್ಣ-ತಂಗಿ ಮಧ್ಯೆ ವೈಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು. ನಾವೇ ಹಲವು ಬಾರಿ ಸಮಾಧಾನಪಡಿಸಿದ್ದೆವು. ಮಂಗಳವಾರ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ನಲ್ಲಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ತಂದೆ ಸತೀಶ್ ಹೇಳಿದ್ದಾರೆ. ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಸತೀಶ್ ತಿಳಿಸಿದ್ದಾರೆ.
ಘಟನೆ ಬಳಿಕ ಪಶ್ಚಾತ್ತಾಪ ಪಟ್ಟು ತಾಯಿಯನ್ನು ರಕ್ಷಿಸಲು ನಿತಿನ್ ಕೆರೆಗೆ ಹಾರಿದ್ದಾನೆ. ಆದ್ರೆ, ಅಷ್ಟರಲ್ಲಾಗಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ. ಆರೋಪಿ ನಿತಿನ್ನನ್ನು ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
In a shocking incident, a mother and her sister were allegedly pushed into a lake and murdered at Marur village in Hunsur taluk on Jan. 24. The crime was committed by his own son. The accused has been arrested by the police.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm