ಬ್ರೇಕಿಂಗ್ ನ್ಯೂಸ್
25-01-24 03:10 pm HK News Desk ಕ್ರೈಂ
ವಿಜಯಪುರ, ಜ 25: ನಗರದ ಪೊಲೀಸ್ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.

ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
ಯಾವಾಗ ಯುವತಿ ತನ್ನನ್ನ ಮದುವೆಯಾಗಬೇಕೆಂದು ದುಂಬಾಲು ಬಿದ್ದಳೋ ಆಗಿನಿಂದ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿ ಸೇವೆಗೆ ಗೈರಾಗಿ ನಾಪತ್ತೆಯಾಗಿದ್ದಾನೆ. ಕಳೆದ 20 ದಿನಗಳಿಂದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ಆತ ಸೇವೆಗೆ ಹಾಜರಾಗಿಲ್ಲ. ಯುವತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿನಾಯಕ ಟಕ್ಕಳಕಿ ಪತ್ತೆಗೆ ಬೀಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ವಿನಾಯಕ ಟಕ್ಕಳಕಿ ಬಂಧನವಾಗಬೇಕು. ಕಾನೂನಿನ ಪ್ರಕಾರ ಆತನಿಗೆ ಶಿಕ್ಷೆ ಆಗಬೇಕು. ಇಲ್ಲವೇ ನನ್ನ ಜೊತೆ ಆತ ಮದುವೆಯಾಗಬೇಕೆಂದು ಯುವತಿ ಪಟ್ಟು ಹಿಡಿದಿದ್ದಾಳೆ. ಪೊಲೀಸ್ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಯ ಲವ್, ಸೆಕ್ಸ್, ದೋಖಾ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
Police constable Vinayak alleged of Love sex and cheating of marriage at Vijayapura. A cade has been filed at Women police station. The police constable is said to be Missing since then.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 08:33 pm
HK News Staffer
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm