ಬ್ರೇಕಿಂಗ್ ನ್ಯೂಸ್
25-01-24 10:09 pm Udupi Correspondent ಕ್ರೈಂ
ಉಡುಪಿ, ಜ 25: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.
ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ.
ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದ. ಬಳಿಕ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಬೆದರಿಸಿ, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ.
ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ಕೊಟ್ಟು ರೂಮ್ ಪಡೆದು ಅತ್ಯಾಚಾರ ಎಸಗಿದ್ದ. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದ. ವಿಡಿಯೋ ಡಿಲೀಟ್ ಮಾಡಬೇಕಾದರೆ ಹಣ ಕೊಡ್ಬೇಕು ಅಂತ ಬ್ಲಾಕ್ ಮೇಲ್ ಮಾಡ್ತಿದ್ದ. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದ ಎಂದು ದೂರಲಾಗಿತ್ತು.
ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ಕೊಡ್ಬೇಕು ಅಂತ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ನೊಂದ ಬಾಲಕಿಯನ್ನ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಗಿರುವ ಕಾರಣ 20ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನ ಉಡುಪಿ ನ್ಯಾಯಾಲಯ ವಿಧಿಸಿದೆ.
Udupi rape accused gets 20 years rigorous imprisonment for raping minor. Accused Shamsuddin was a auto driver by profession and has raped a minor girl by blackmailing her of her photos.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm