ಬ್ರೇಕಿಂಗ್ ನ್ಯೂಸ್
25-01-24 10:09 pm Udupi Correspondent ಕ್ರೈಂ
ಉಡುಪಿ, ಜ 25: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.
ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ.
ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದ. ಬಳಿಕ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಬೆದರಿಸಿ, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದ.
ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ಕೊಟ್ಟು ರೂಮ್ ಪಡೆದು ಅತ್ಯಾಚಾರ ಎಸಗಿದ್ದ. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದ. ವಿಡಿಯೋ ಡಿಲೀಟ್ ಮಾಡಬೇಕಾದರೆ ಹಣ ಕೊಡ್ಬೇಕು ಅಂತ ಬ್ಲಾಕ್ ಮೇಲ್ ಮಾಡ್ತಿದ್ದ. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದ ಎಂದು ದೂರಲಾಗಿತ್ತು.
ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ಕೊಡ್ಬೇಕು ಅಂತ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ನೊಂದ ಬಾಲಕಿಯನ್ನ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಗಿರುವ ಕಾರಣ 20ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನ ಉಡುಪಿ ನ್ಯಾಯಾಲಯ ವಿಧಿಸಿದೆ.
Udupi rape accused gets 20 years rigorous imprisonment for raping minor. Accused Shamsuddin was a auto driver by profession and has raped a minor girl by blackmailing her of her photos.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm