ಬ್ರೇಕಿಂಗ್ ನ್ಯೂಸ್
22-11-20 03:13 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಮಲೈಕಾ ಕೋ ಆಪರೇಟಿವ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಸ್ ಎಂಬವರನ್ನು ಬಂಧಿಸಿದ್ದಾರೆ.
ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಒಂದು ತಿಂಗಳಾದ್ರೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂದು ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ಈಗ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಗ್ರಾಹಕರನ್ನು ವಂಚಿಸಿದ್ದ ಆರೋಪ ಎದುರಿಸುತ್ತಿರುವ ರೀನಾ ಜೋಸ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಪೊಲೀಸರು ಮಂಗಳೂರಿನಲ್ಲಿಯೇ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.


ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಮತ್ತಷ್ಟು ವಿಚಾರಣೆಗಾಗಿ ಮೂರು ದಿನಗಳ ಕಸ್ಟಡಿ ಪಡೆದಿದ್ದಾರೆ. ಇದೇ ವೇಳೆ, ಇತರೇ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿದ್ದ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ, ಸಂಸ್ಥೆಯ ಮುಖ್ಯಸ್ಥ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಆಪ್ತೆಯೂ ಆಗಿದ್ದಳು. ಗಿಲ್ಬರ್ಟ್ ಮತ್ತು ರೀನಾ ಜೋಸ್ ಸೇರಿ ನೂರಾರು ಗ್ರಾಹಕರಿಗೆ ಟೋಪಿ ಹಾಕಿದ್ದಾರೆ ಎಂದು ದೂರು ಕೇಳಿಬಂದಿತ್ತು.

ಮಲೈಕಾ ಸೊಸೈಟಿ ಮಂಗಳೂರು, ಉಡುಪಿ, ಗೋವಾ, ಮುಂಬೈ ಸೇರಿದಂತೆ ಹಲವೆಡೆ ನೂರಾರು ಕಚೇರಿಗಳನ್ನು ಹೊಂದಿದ್ದು, ಸಾವಿರಾರು ಗ್ರಾಹಕರು ತಮ್ಮ ಕಷ್ಟದ ದುಡ್ಡನ್ನು ಡಿಪಾಸಿಟ್ ಮಾಡಿದ್ದರು. ಅಂದಾಜು 350 ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲೇ 150ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ.
Headline Karnataka Impact, Malaika Credit Society Mangalore Manager Reena Josh has been arrested by the Pandeshwar Police in connection of Cheating investors of 350 crores by the company MD Gilbert Baptist and others.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am