ಬ್ರೇಕಿಂಗ್ ನ್ಯೂಸ್
29-01-24 06:50 pm Bangalore Correspondent ಕ್ರೈಂ
ಬೆಂಗಳೂರು, ಜ 29: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಅಧಿಕಾರಿಗಳ ಸೋಗಿನಲ್ಲಿ ಜ್ಯುವೆಲ್ಲರ್ಸ್ ಶಾಪ್ ದೋಚಿ ಪರಾರಿಯಾಗಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು.
ಜನವರಿ 27ರಂದು ಕಾರಿನಲ್ಲಿ ಕೆ.ಆರ್.ಪುರಂನ ಮಹಾಲಕ್ಷ್ಮಿ ಜ್ಯುವೆಲರ್ಸ್ ಶಾಪ್ಗೆ ಬಂದಿದ್ದ ಆರೋಪಿಗಳು, ತಾವು 'ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು, ಬೆಂಗಳೂರಿನ ಹಲವು ಚಿನ್ನದಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ. ಹೀಗಾಗಿ ದಾಳಿ ಮಾಡಿದ್ದೇವೆ' ಎಂದಿದ್ದರು.

ಸುಮಾರು 40 ನಿಮಿಷ ಅಂಗಡಿಯಲ್ಲಿ ಶೋಧ ನಡೆಸಿದಂತೆ ಮಾಡಿ ಬಳಿಕ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು, ಬಳಿಕ ಅಂಗಡಿ ಮಾಲೀಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಬಿಐಎಸ್ ಕಚೇರಿಗೆ ಬರುವಂತೆ ಹೇಳಿ ತೆರಳಿದ್ದರು. ಆದರೆ ಹೊರಡುವ ಮುನ್ನ ಚಿನ್ನದ ಅಂಗಡಿಯ ಸಿಸಿಟಿವಿ ಡಿವಿಆರ್ನ್ನು ಆರೋಪಿಗಳು ಪಡೆದುಕೊಂಡಿದ್ದರು.
ಇದರಿಂದ ಅನುಮಾನಗೊಂಡ ಚಿನ್ನದ ಅಂಗಡಿಯ ಕೆಲ ಸಿಬ್ಬಂದಿ ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿದ್ದಾರೆ. ಇತ್ತ ಅಂಗಡಿ ಮಾಲೀಕ ಸಹ ಅನುಮಾನಗೊಂಡು ಕೆಆರ್ಪುರಂ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ತಿಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಭರದಲ್ಲಿ ಟಿ.ಸಿ ಪಾಳ್ಯ ಜಂಕ್ಷನ್ ಬಳಿ ಸರಣಿ ಅಪಘಾತವೆಸಗಿದ್ದಾರೆ. ಆದರೆ ಸಿನಿಮೀಯ ಮಾದರಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಸಂಪತ್ ಈ ಹಿಂದೆ ಮಂಡ್ಯದಲ್ಲಿ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಸೆರೆವಾಸ ಅನುಭವಿಸಿ ಬಿಡುಗಡೆಯಾಗಿದ್ದ. ಬಳಿಕ ತಮಿಳುನಾಡು ಮೂಲದ ವ್ಯಕ್ತಿಯೊಬ್ಬನ ಸೂಚನೆಯಂತೆ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಗಳ ಬಂಧನವಾಗುತ್ತಿದ್ದಂತೆ ತಮಿಳುನಾಡು ಮೂಲದ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
Four make fake raid as BIS officers at Mahalakshmi Jewellers in Bangalore, arrested. The four were caught just like movie style by police
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am