ಬ್ರೇಕಿಂಗ್ ನ್ಯೂಸ್
29-01-24 06:50 pm Bangalore Correspondent ಕ್ರೈಂ
ಬೆಂಗಳೂರು, ಜ 29: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಅಧಿಕಾರಿಗಳ ಸೋಗಿನಲ್ಲಿ ಜ್ಯುವೆಲ್ಲರ್ಸ್ ಶಾಪ್ ದೋಚಿ ಪರಾರಿಯಾಗಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು.
ಜನವರಿ 27ರಂದು ಕಾರಿನಲ್ಲಿ ಕೆ.ಆರ್.ಪುರಂನ ಮಹಾಲಕ್ಷ್ಮಿ ಜ್ಯುವೆಲರ್ಸ್ ಶಾಪ್ಗೆ ಬಂದಿದ್ದ ಆರೋಪಿಗಳು, ತಾವು 'ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು, ಬೆಂಗಳೂರಿನ ಹಲವು ಚಿನ್ನದಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ. ಹೀಗಾಗಿ ದಾಳಿ ಮಾಡಿದ್ದೇವೆ' ಎಂದಿದ್ದರು.

ಸುಮಾರು 40 ನಿಮಿಷ ಅಂಗಡಿಯಲ್ಲಿ ಶೋಧ ನಡೆಸಿದಂತೆ ಮಾಡಿ ಬಳಿಕ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು, ಬಳಿಕ ಅಂಗಡಿ ಮಾಲೀಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಬಿಐಎಸ್ ಕಚೇರಿಗೆ ಬರುವಂತೆ ಹೇಳಿ ತೆರಳಿದ್ದರು. ಆದರೆ ಹೊರಡುವ ಮುನ್ನ ಚಿನ್ನದ ಅಂಗಡಿಯ ಸಿಸಿಟಿವಿ ಡಿವಿಆರ್ನ್ನು ಆರೋಪಿಗಳು ಪಡೆದುಕೊಂಡಿದ್ದರು.
ಇದರಿಂದ ಅನುಮಾನಗೊಂಡ ಚಿನ್ನದ ಅಂಗಡಿಯ ಕೆಲ ಸಿಬ್ಬಂದಿ ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿದ್ದಾರೆ. ಇತ್ತ ಅಂಗಡಿ ಮಾಲೀಕ ಸಹ ಅನುಮಾನಗೊಂಡು ಕೆಆರ್ಪುರಂ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ತಿಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಭರದಲ್ಲಿ ಟಿ.ಸಿ ಪಾಳ್ಯ ಜಂಕ್ಷನ್ ಬಳಿ ಸರಣಿ ಅಪಘಾತವೆಸಗಿದ್ದಾರೆ. ಆದರೆ ಸಿನಿಮೀಯ ಮಾದರಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಸಂಪತ್ ಈ ಹಿಂದೆ ಮಂಡ್ಯದಲ್ಲಿ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಸೆರೆವಾಸ ಅನುಭವಿಸಿ ಬಿಡುಗಡೆಯಾಗಿದ್ದ. ಬಳಿಕ ತಮಿಳುನಾಡು ಮೂಲದ ವ್ಯಕ್ತಿಯೊಬ್ಬನ ಸೂಚನೆಯಂತೆ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಗಳ ಬಂಧನವಾಗುತ್ತಿದ್ದಂತೆ ತಮಿಳುನಾಡು ಮೂಲದ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
Four make fake raid as BIS officers at Mahalakshmi Jewellers in Bangalore, arrested. The four were caught just like movie style by police
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm