ಬ್ರೇಕಿಂಗ್ ನ್ಯೂಸ್
29-01-24 06:50 pm Bangalore Correspondent ಕ್ರೈಂ
ಬೆಂಗಳೂರು, ಜ 29: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಅಧಿಕಾರಿಗಳ ಸೋಗಿನಲ್ಲಿ ಜ್ಯುವೆಲ್ಲರ್ಸ್ ಶಾಪ್ ದೋಚಿ ಪರಾರಿಯಾಗಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಕೆ.ಆರ್.ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು.
ಜನವರಿ 27ರಂದು ಕಾರಿನಲ್ಲಿ ಕೆ.ಆರ್.ಪುರಂನ ಮಹಾಲಕ್ಷ್ಮಿ ಜ್ಯುವೆಲರ್ಸ್ ಶಾಪ್ಗೆ ಬಂದಿದ್ದ ಆರೋಪಿಗಳು, ತಾವು 'ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು, ಬೆಂಗಳೂರಿನ ಹಲವು ಚಿನ್ನದಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ. ಹೀಗಾಗಿ ದಾಳಿ ಮಾಡಿದ್ದೇವೆ' ಎಂದಿದ್ದರು.

ಸುಮಾರು 40 ನಿಮಿಷ ಅಂಗಡಿಯಲ್ಲಿ ಶೋಧ ನಡೆಸಿದಂತೆ ಮಾಡಿ ಬಳಿಕ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು, ಬಳಿಕ ಅಂಗಡಿ ಮಾಲೀಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಬಿಐಎಸ್ ಕಚೇರಿಗೆ ಬರುವಂತೆ ಹೇಳಿ ತೆರಳಿದ್ದರು. ಆದರೆ ಹೊರಡುವ ಮುನ್ನ ಚಿನ್ನದ ಅಂಗಡಿಯ ಸಿಸಿಟಿವಿ ಡಿವಿಆರ್ನ್ನು ಆರೋಪಿಗಳು ಪಡೆದುಕೊಂಡಿದ್ದರು.
ಇದರಿಂದ ಅನುಮಾನಗೊಂಡ ಚಿನ್ನದ ಅಂಗಡಿಯ ಕೆಲ ಸಿಬ್ಬಂದಿ ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿದ್ದಾರೆ. ಇತ್ತ ಅಂಗಡಿ ಮಾಲೀಕ ಸಹ ಅನುಮಾನಗೊಂಡು ಕೆಆರ್ಪುರಂ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ತಿಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಭರದಲ್ಲಿ ಟಿ.ಸಿ ಪಾಳ್ಯ ಜಂಕ್ಷನ್ ಬಳಿ ಸರಣಿ ಅಪಘಾತವೆಸಗಿದ್ದಾರೆ. ಆದರೆ ಸಿನಿಮೀಯ ಮಾದರಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರ ಪೈಕಿ ಸಂಪತ್ ಈ ಹಿಂದೆ ಮಂಡ್ಯದಲ್ಲಿ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಸೆರೆವಾಸ ಅನುಭವಿಸಿ ಬಿಡುಗಡೆಯಾಗಿದ್ದ. ಬಳಿಕ ತಮಿಳುನಾಡು ಮೂಲದ ವ್ಯಕ್ತಿಯೊಬ್ಬನ ಸೂಚನೆಯಂತೆ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಗಳ ಬಂಧನವಾಗುತ್ತಿದ್ದಂತೆ ತಮಿಳುನಾಡು ಮೂಲದ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
Four make fake raid as BIS officers at Mahalakshmi Jewellers in Bangalore, arrested. The four were caught just like movie style by police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm