ಬ್ರೇಕಿಂಗ್ ನ್ಯೂಸ್
30-01-24 12:49 pm Bangalore Correspondent ಕ್ರೈಂ
ಬೆಂಗಳೂರು, ಜ 30: ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷ-ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಸಂಧ್ಯಾ ಪವಿತ್ರಾ ನಾಗರಾಜ್ ಎಂಬವರ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿ ಸಂಧ್ಯಾ ಅವರು ಫೇಸ್ ಬುಕ್ನಲ್ಲಿ ಪರಿಚಯ ಮಾಡಿಕೊಂಡು, ತಾನು ಕಾಂಗ್ರೆಸ್ ಪಕ್ಷದ ಯುವ ನಾಯಕಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿದ್ದಾರೆ ಎಂದು ವೀಣಾ ಎಂಬ ಯುವತಿ ದೂರು ದಾಖಲು ಮಾಡಿದ್ದಾರೆ.

ಬೆಂಗಳೂರು ಟು ಯಾದಗಿರಿ ವಂಚನೆ ಜಾಲ ;
ದೂರು ನೀಡಿರುವ ಯುವತಿ ಮಾತ್ರವಲ್ಲದೇ ಇನ್ನು ಹತ್ತಾರು ಜನರಿಗೆ ಕೆಲಸ ಕೊಡಿಸುತ್ತೇನೆ ಎಂದು ಹಣ ಪೀಕಿ ವಂಚನೆ ಮಾಡಿರುವ ಆರೋಪ ಸಂಧ್ಯಾ ವಿರುದ್ಧ ಕೇಳಿ ಬಂದಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಯಾದಗಿರಿವರೆಗೂ ಸಂಧ್ಯಾ ವಂಚನೆ ಜಾಲ ಹರಡಿದೆ ಎಂಬ ಆರೋಪ ಎದುರಾಗಿದೆ.
ಎಂಎಸ್ ಬಿಲ್ಡಿಂಗ್ನಲ್ಲಿ ಕೆಲಸ ಕೊಡಿಸೋದಾಗಿ ವಂಚನೆ
ಬೆಂಗಳೂರಿನ ಮಹಿಳೆ ಮತ್ತು ಯಾದಗಿರಿಯ ಯುವಕನಿಗೂ ಯುವ ಕಾಂಗ್ರೆಸ್ ಎಂದು ಹೇಳಿ ಕೊಂಡು ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದರಂತೆ. ಈ ಸಂಬಂಧ ಬೆಂಗಳೂರಿನ ವೀಣಾ ಅವರು ಜ್ಞಾನ ಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2021ರಲ್ಲಿ ಎಂ.ಎಸ್ ಬಿಲ್ಡಿಂಗ್ ನಲ್ಲಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂಪಾಯಿಗಳನ್ನು ಆರೋಪಿ ಸಂಧ್ಯಾ ಪಡೆದುಕೊಂಡಿದ್ದರಂತೆ. ಆದರೆ 3 ವರ್ಷ ಆದರೂ ಕೆಲಸ ಕೊಡಿಸಲಿಲ್ಲ, ಹಣವನ್ನೂ ವಾಪಸ್ ನೀಡಿಲ್ಲ ಎಂದು ವೀಣಾ ಆರೋಪಿಸಿದ್ದಾರೆ.
ಯಾದಗಿರಿ ಯುವಕನಿಂದ ವಿಡಿಯೋ
ಇನ್ನೂ, ಯಾದಗಿರಿಗೆ ಸೇರಿದ ಯುವಕ ಚಂದ್ರ ಎಂಬಾತನಿಗೆ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆದು ಆರೋಪಿ ಸಂಧ್ಯಾ ವಂಚನೆ ಮಾಡಿದ್ದರಂತೆ. ಸದ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಚಂದು, ತನ್ನ ಹಣ ತನಗೆ ವಾಪಸ್ ನೀಡಿ ಎಂದು ವಿಡಿಯೋ ಮಾಡಿ ಗೋಳಿಟ್ಟಿದ್ದಾರೆ. ಮನೆಯಲ್ಲಿ ಕಷ್ಟ ಇದ್ದು, ಅನಾರೋಗ್ಯ ಪೀಡಿತನಾಗಿ ಆಸ್ಪತ್ರೆ ಖರ್ಚಿಗೆ ಹಣ ಬೇಕಿದೆ ಎಂದು ಯುವಕ ಚಂದು ವಿಡಿಯೋದಲ್ಲಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ.
Congress member Sandhya Pavithra Nagaraj cheats many by Promising them of job offers by showing her pictures with cm Siddaramaiah and Dk Shivakumar. A case has been filed aginst her in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm