ಬ್ರೇಕಿಂಗ್ ನ್ಯೂಸ್
01-02-24 01:54 pm HK News Desk ಕ್ರೈಂ
ಕಾಸರಗೋಡು, ಫೆ.1: ಕಾಸರಗೋಡಿನ ವ್ಯಕ್ತಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ದು ಹನಿಟ್ರ್ಯಾಪ್ ಮಾಡಿರುವ ಪ್ರಕರಣದ ಬೆನ್ನತ್ತಿದ ಮೇಲ್ಪರಂಬ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾಂಗಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಬಗ್ಗೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೋಜಿಕ್ಕೋಡ್ ಮೂಲದ ಎಂ.ಪಿ.ರುಬೀನಾ(29), ಆಕೆಯ ಪತಿ ಪ್ರಕರಣದ ಸೂತ್ರಧಾರ ಫೈಝಲ್ (37), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್. ಸಿದ್ದಿಕ್ (48), ಮಾಂಗಾಡ್ನ ದಿಲ್ಶಾದ್ (40), ಮುಟ್ಟತ್ತೋಡಿಯ ನಫೀಸತ್ ಮಿಸ್ರಿಯ (40), ಮಾಂಗಾಡ್ನ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್ನ ರಫೀಕ್ ಮಹಮ್ಮದ್ (42) ಬಂಧಿತ ಆರೋಪಿಗಳು.
ಜನವರಿ 23 ರಂದು ರುಬಿನಾ ಎಂಬಾಕೆ ಮೊಬೈಲ್ ಮೂಲಕ 59 ವರ್ಷದ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಳು. ಶೈಕ್ಷಣಿಕ ಉದ್ದೇಶಕ್ಕಾಗಿ ಲ್ಯಾಪ್ ಟಾಪ್ ಖರೀದಿಸಿದ್ದು ಅದು ಹಾಳಾಗಿದೆ. ನಿಮ್ಮ ಸಮಾಜ ಸೇವೆ ಬಗ್ಗೆ ತಿಳಿದುಕೊಂಡಿದ್ದೇನೆ. ಅದಕ್ಕಾಗಿ ಸಹಾಯ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಳು. ಅದರಂತೆ ಯುವತಿಯೊಂದಿಗೆ ಕಾಸರಗೋಡಿಗೆ ಆಗಮಿಸಿದ ಅವರು ಲ್ಯಾಪ್ ಟಾಪ್ ರಿಪೇರಿ ಸಾಧ್ಯವಿಲ್ಲ. ಹೊಸ ಲ್ಯಾಪ್ ಟಾಪ್ ಖರೀದಿಸಿ ಕೊಡುವುದಾಗಿ ಹೇಳಿದ್ದರು.
ಲ್ಯಾಪ್ಟಾಪ್ ಖರೀದಿಸುವ ನೆಪದಲ್ಲಿ ಆರೋಪಿ ಯುವತಿ ರುಬಿನಾ ಮಂಗಳೂರಿಗೆ ಬಂದಿದ್ದಳು. ಈ ವೇಳೆ, ಆ ವ್ಯಕ್ತಿಯೊಂದಿಗೆ ಸಲುಗೆಯಲ್ಲಿದ್ದ ವಸತಿ ಗೃಹವೊಂದಕ್ಕೆ ತೆರಳಿದ್ದರು. ಅಷ್ಟರಲ್ಲಿ ರುಬಿನಾ ಪತಿ ಸೇರಿದಂತೆ ಐದಾರು ಮಂದಿಯ ತಂಡ ಎಂಟ್ರಿಯಾಗಿದ್ದು ಬಲವಂತದಿಂದ ನಗ್ನ ಫೋಟೊ ತೆಗೆದುಕೊಂಡಿದ್ದಾರೆ. ಬಳಿಕ ಆರೋಪಿಗಳು ಆ ವ್ಯಕ್ತಿಯನ್ನು ಕಾಸರಗೋಡಿಗೆ ಕರೆದೊಯ್ದು ಕೂಡಿಹಾಕಿ ಬೆದರಿಸಿ ₹5 ಲಕ್ಷ ಸುಲಿಗೆ ಮಾಡಿದ್ದಾರೆ. ಆನಂತರವೂ, ಆರೋಪಿಗಳು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು.
ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಮೇಲ್ಪರಂಬ ಠಾಣಾ ಎಸ್ ಐ ಸುರೇಶ್ ಮತ್ತು ಅರುಣ್ ಮೋಹನ್ ಹನಿಟ್ರಾಪ್ ತಂಡದ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
Kerala Police arrested seven people, including a woman, on Wednesday for embezzling around Rs 5 lakh from a 59-year-old man through 'honey trap'. The arrested are Kasaragod natives Dilshad, Siddique, Lubna, Faisal and three others.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm