ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm