ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm