ಬ್ರೇಕಿಂಗ್ ನ್ಯೂಸ್
23-11-20 11:59 am Bangalore Correspondent ಕ್ರೈಂ
ಬೆಂಗಳೂರು, ನವೆಂಬರ್ 23: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.
ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Three Persons including police head constable were caught impersonating candidates appearing for a written exam to recruit constables for the Karnataka State Reserve Police (KSRP) and Indian Reserve Battalion (IRB).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm