ಬ್ರೇಕಿಂಗ್ ನ್ಯೂಸ್
03-02-24 11:54 am HK News Desk ಕ್ರೈಂ
ಕಾಸರಗೋಡು, ಫೆ.3: ನಕಲಿ ವೀಸಾ, ಪಾಸ್ಪೋರ್ಟ್ ದಂಧೆಯಲ್ಲಿ ತೊಡಗಿಸಿದ್ದ ಜಾಲವೊಂದನ್ನು ಕಾಸರಗೋಡು ಜಿಲ್ಲೆಯ ಬೇಡಗಂ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್, ಕಾಲೇಜು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದಲ್ಲಿ ಉದ್ಯೋಗಿಯಾಗಿದ್ದವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಮೂರು ಪಾಸ್ಪೋರ್ಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ತ್ರಿಕರಿಪುರ ನಿವಾಸಿ ಎಂ.ಎ. ಅಹಮದ್ ಅಬ್ರಾರ್ (26) ಮತ್ತು ಎಂ.ಎ. ಸಾಬಿತ್ (25) ಮತ್ತು ಕಾಞಂಗಾಡು ಪುರಸಭೆಯ ಪಡನ್ನಕ್ಕಾಡ್ ಮಹಮ್ಮದ್ ಸಫ್ವಾನ್ (28) ಬಂಧಿತ ಆರೋಪಿಗಳಾಗಿದ್ದಾರೆ.
ನಕಲಿ ರಬ್ಬರ್ ಸೀಲ್ಗಳಲ್ಲಿ ವೈದ್ಯರು ಮತ್ತು ಬ್ಯಾಂಕ್ ವ್ಯವಸ್ಥಾಪಕರ ರಬ್ಬರ್ ಸ್ಟ್ಯಾಂಪ್ಗಳು ಸೇರಿವೆ. ವಶಪಡಿಸಿಕೊಂಡ ಲೆಟರ್ ಪ್ಯಾಡ್ಗಳಲ್ಲಿ ಪಟಣ್ಣ ಶರಾಫ್ ಕಾಲೇಜು, ಚಟ್ಟಂಚಾಲ್ ಎಂಐಸಿ ಕಾಲೇಜು ಮತ್ತು ಎಂಇಎಸ್ ಕಾಲೇಜುಗಳದ್ದಿವೆ. ಗುರುವಾರ ರಾತ್ರಿ ಬೇಡಗಂ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ನಕಲಿ ದಾಖಲೆ, ರಬ್ಬರ್ ಸೀಲು, ಲೆಟರ್ ಪ್ಯಾಡ್ ಗಳೊಂದಿಗೆ ಈ ಮೂವರ ತಂಡ ಸಿಕ್ಕಿಬಿದ್ದಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಲುವಾ, ಅಂಗಮಾಲಿ ಫೆಡರಲ್ ಬ್ಯಾಂಕ್, ತ್ರಿಕ್ಕರಿಪುರ ಸೌತ್ ಇಂಡಿಯನ್ ಬ್ಯಾಂಕ್ ಮೊದಲಾದ ಬ್ಯಾಂಕ್ಗಳ ವ್ಯವಸ್ಥಾಪಕರ ಹೆಸರಿನಲ್ಲಿರುವ ನಕಲಿ ರಬ್ಬರ್ ಸ್ಟ್ಯಾಂಪ್ ಗಳು ಸಿಕ್ಕಿವೆ. ಜೊತೆಗೆ ಬೆಂಗಳೂರು ಸೂಪರ್ ಸ್ಪೆಷಾಲಿಟಿ ಕೇಂದ್ರದ ಉದ್ಯೋಗ ದೃಢೀಕರಣ ಪತ್ರ ಹಾಗೂ ಎಂಇಎಸ್ ಕಾಲೇಜಿಗೆ ಸೇರಿದ ನಕಲಿ ನಿರಾಕ್ಷೇಪಣಾ ಪತ್ರವನ್ನೂ ವಶಪಡಿಸಲಾಗಿದೆ. ಆರೋಪಿಗಳು ಕೊರಿಯಾ ಇನ್ನಿತರ ದೇಶಗಳಿಗೆ ನಕಲಿ ವೀಸಾ ಮಾಡಿಕೊಡುವ ದಂಧೆಯಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ.
Three persons, including an employee of KIA in South Korea, were arrested with 37 fake seals, and letterheads of banks, colleges, and doctors, said Bedakam Police in Kasaragod. Three passports were also seized from them but they appear to be genuine, said Bedakam Sub-Inspector M Gangadharan.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm