ಬ್ರೇಕಿಂಗ್ ನ್ಯೂಸ್
03-02-24 11:54 am HK News Desk ಕ್ರೈಂ
ಕಾಸರಗೋಡು, ಫೆ.3: ನಕಲಿ ವೀಸಾ, ಪಾಸ್ಪೋರ್ಟ್ ದಂಧೆಯಲ್ಲಿ ತೊಡಗಿಸಿದ್ದ ಜಾಲವೊಂದನ್ನು ಕಾಸರಗೋಡು ಜಿಲ್ಲೆಯ ಬೇಡಗಂ ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್, ಕಾಲೇಜು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದಲ್ಲಿ ಉದ್ಯೋಗಿಯಾಗಿದ್ದವರು ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಮೂರು ಪಾಸ್ಪೋರ್ಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ತ್ರಿಕರಿಪುರ ನಿವಾಸಿ ಎಂ.ಎ. ಅಹಮದ್ ಅಬ್ರಾರ್ (26) ಮತ್ತು ಎಂ.ಎ. ಸಾಬಿತ್ (25) ಮತ್ತು ಕಾಞಂಗಾಡು ಪುರಸಭೆಯ ಪಡನ್ನಕ್ಕಾಡ್ ಮಹಮ್ಮದ್ ಸಫ್ವಾನ್ (28) ಬಂಧಿತ ಆರೋಪಿಗಳಾಗಿದ್ದಾರೆ.
ನಕಲಿ ರಬ್ಬರ್ ಸೀಲ್ಗಳಲ್ಲಿ ವೈದ್ಯರು ಮತ್ತು ಬ್ಯಾಂಕ್ ವ್ಯವಸ್ಥಾಪಕರ ರಬ್ಬರ್ ಸ್ಟ್ಯಾಂಪ್ಗಳು ಸೇರಿವೆ. ವಶಪಡಿಸಿಕೊಂಡ ಲೆಟರ್ ಪ್ಯಾಡ್ಗಳಲ್ಲಿ ಪಟಣ್ಣ ಶರಾಫ್ ಕಾಲೇಜು, ಚಟ್ಟಂಚಾಲ್ ಎಂಐಸಿ ಕಾಲೇಜು ಮತ್ತು ಎಂಇಎಸ್ ಕಾಲೇಜುಗಳದ್ದಿವೆ. ಗುರುವಾರ ರಾತ್ರಿ ಬೇಡಗಂ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ನಕಲಿ ದಾಖಲೆ, ರಬ್ಬರ್ ಸೀಲು, ಲೆಟರ್ ಪ್ಯಾಡ್ ಗಳೊಂದಿಗೆ ಈ ಮೂವರ ತಂಡ ಸಿಕ್ಕಿಬಿದ್ದಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಲುವಾ, ಅಂಗಮಾಲಿ ಫೆಡರಲ್ ಬ್ಯಾಂಕ್, ತ್ರಿಕ್ಕರಿಪುರ ಸೌತ್ ಇಂಡಿಯನ್ ಬ್ಯಾಂಕ್ ಮೊದಲಾದ ಬ್ಯಾಂಕ್ಗಳ ವ್ಯವಸ್ಥಾಪಕರ ಹೆಸರಿನಲ್ಲಿರುವ ನಕಲಿ ರಬ್ಬರ್ ಸ್ಟ್ಯಾಂಪ್ ಗಳು ಸಿಕ್ಕಿವೆ. ಜೊತೆಗೆ ಬೆಂಗಳೂರು ಸೂಪರ್ ಸ್ಪೆಷಾಲಿಟಿ ಕೇಂದ್ರದ ಉದ್ಯೋಗ ದೃಢೀಕರಣ ಪತ್ರ ಹಾಗೂ ಎಂಇಎಸ್ ಕಾಲೇಜಿಗೆ ಸೇರಿದ ನಕಲಿ ನಿರಾಕ್ಷೇಪಣಾ ಪತ್ರವನ್ನೂ ವಶಪಡಿಸಲಾಗಿದೆ. ಆರೋಪಿಗಳು ಕೊರಿಯಾ ಇನ್ನಿತರ ದೇಶಗಳಿಗೆ ನಕಲಿ ವೀಸಾ ಮಾಡಿಕೊಡುವ ದಂಧೆಯಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ.
Three persons, including an employee of KIA in South Korea, were arrested with 37 fake seals, and letterheads of banks, colleges, and doctors, said Bedakam Police in Kasaragod. Three passports were also seized from them but they appear to be genuine, said Bedakam Sub-Inspector M Gangadharan.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm