ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm