ಬ್ರೇಕಿಂಗ್ ನ್ಯೂಸ್
04-02-24 06:50 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.4: ಆನ್ಲೈನ್ ಮೋಸದ ಉದ್ದೇಶದಲ್ಲಿ ಅಕ್ರಮವಾಗಿ ಅಪರಿಮಿತ ಸಿಮ್ ಗಳನ್ನು ಸಾಗಿಸುತ್ತಿದ್ದ ನಾಲ್ವರು ಯುವಕರನ್ನು ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಸುಳಿವು ಆಧರಿಸಿ ಬಂಧಿಸಿದ್ದಾರೆ.
ಒಬ್ಬ ಅಪ್ರಾಪ್ತ ಸೇರಿ ಐವರು ಯುವಕರಲ್ಲಿ 42 ಅಕ್ರಮ ಸಿಮ್ಗಳು ಪತ್ತೆಯಾಗಿದ್ದು ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22), ಮೊಹಮ್ಮದ್ ಸಾದಿಕ್ (27) ಬಂಧಿತರು. ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಇದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದು ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಅಕ್ಬರ್ ಆಲಿ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನಲ್ಲಿ ಹೇಳಿ ಸಿಮ್ ಖರೀದಿಸುತ್ತಿದ್ದ. ಮುಸ್ತಫಾಗೆ ರಮೀಜ್ ಮತ್ತು ಸಾದಿಕ್ ನೆರವು ನೀಡಿದ್ದು ಬೇರೆ ಬೇರೆ ಕಡೆಗಳಲ್ಲಿ ತಮ್ಮ ಆತ್ಮೀಯರಿಂದ ಕಮಿಷನ್ ಕೊಟ್ಟು ಸಿಮ್ ಖರೀದಿಸಿ ಕೊಡುತ್ತಿದ್ದರು. ನಂತರ ಅಕ್ಬರ್ ಆಲಿ ಸೂಚನೆಯಂತೆ ಇವರು ಸಿಮ್ ಕಾರ್ಡ್ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಪೂರೈಸುವ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ನಕಲಿ ಸಿಮ್ ಪೂರೈಕೆ ಜಾಲ ಪತ್ತೆಯಾಗಿದ್ದು ಇದರ ಹಿಂದಿನ ಅಜೆಂಡಾ ಬಗ್ಗೆ ಕುತೂಹಲ ಉಂಟಾಗಿದೆ.
The Dharmasthala police at Dakshina Kannada in Karnataka have successfully dismantled an illegal operation involving the purchase of 42 SIM cards, suspected to be linked to a foreign currency transfer business. The accused, allegedly part of a clandestine network, were reportedly engaged in converting foreign currency into Indian rupees through online channels with the help of foreign intermediaries.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm