ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am