ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm