ಬ್ರೇಕಿಂಗ್ ನ್ಯೂಸ್
04-02-24 07:55 pm HK News Desk ಕ್ರೈಂ
ಹಾಸನ, ಫೆ.4: ಪಿಸ್ತೂಲ್ ಹಿಡಿದು ಒಂಟಿ ಮನೆಗೆ ನುಗ್ಗಿರುವ ಇಬ್ಬರು ದರೋಡೆಕೋರರು ಮನೆಯ ಗೋಡೆಗೆ ಗುಂಡು ಹಾರಿಸಿ ಮನೆಯಲ್ಲಿದ್ದ ಮಹಿಳೆ ಧರಿಸಿದ್ದ ಚಿನ್ನಾಭರಣಗಳನ್ನು ಬಲವಂತವಾಗಿ ಕಸಿದು ಎಸ್ಕೇಪ್ ಆಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಮುದಿಗೆರೆ ಕ್ರಾಸ್ನಲ್ಲಿ ನಡೆದಿದೆ.
ಗ್ರಾಮದ ರವಿ ಎಂಬವರು ಶನಿವಾರ ಸಂಜೆ ಮನೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಕರವಸ್ತ್ರ ಹಾಕಿಕೊಂಡು ಇಬ್ಬರು ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ರವಿ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಇದ್ದು, ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ. ಪಿಸ್ತೂಲ್ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ತಮ್ಮ ಮಕ್ಕಳನ್ನು ರೂಂನಲ್ಲಿ ಕೂಡಿ ಹಾಕಿದ್ದಾರೆ. ಒಡವೆ ಕೊಡದಿದ್ದರೆ ಗುಂಡು ಹಾರಿಸುವುದಾಗಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದು, ಈ ವೇಳೆ ಶೃತಿ ಮೈಮೇಲಿದ್ದ ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ತೆಗೆದು ಕೊಟ್ಟಿದ್ದಾರೆ. ಬಳಿಕ ಅವರ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.


ಪಿಸ್ತೂಲ್ ಶಬ್ದ ಕೇಳುತ್ತಿದ್ದಂತೆ ರವಿ ಮನೆಗೆ ಓಡಿ ಬಂದಿದ್ದು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿ ಕಳ್ಳರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕಳ್ಳರು ಓಡಿ ಹೋಗುವ ದೃಶ್ಯ ಅಲ್ಲಿಯೇ ಸನಿಹ ಸಿಸಿಟಿಯಲ್ಲಿ ಸೆರೆಯಾಗಿದೆ. ಮನೆಗೆ ನುಗ್ಗಿದ ವೇಳೆ ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Hassan robbers threaten people in home rob gold jewellery by showing pistol.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm