ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm