ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm