ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm