ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am