ಬ್ರೇಕಿಂಗ್ ನ್ಯೂಸ್
05-02-24 01:34 pm Mangalore Correspondent ಕ್ರೈಂ
ಮಂಗಳೂರು, ಫೆ.5: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿ ಪ್ರಕರಣ ನಡೆದಿದ್ದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕ ಪಣಂಬೂರು ಬೀಚ್ ನಲ್ಲಿ ಜೊತೆಗಿದ್ದಾಗ ಹಿಂದು ಸಂಘಟನೆ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಸಂಬಂಧಿಸಿ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ (20) ಬಂಧಿತರು. ಇವರನ್ನು ರಾಮಸೇನೆ ಸಂಘಟನೆ ಕಾರ್ಯಕರ್ತರು ಎಂದು ಗುರುತಿಸಲಾಗಿದೆ.
ಯುವಕ - ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ವಿಡಿಯೋ ಮಾಡಿದ್ದಾರೆ. ಆನಂತರ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಹಿಂದು ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಂತಹ ಕೃತ್ಯ ಮರುಕಳಿಸದಂತೆ ಪಣಂಬೂರು ಬೀಚ್, ತಣ್ಣೀರುಬಾವಿ ಬೀಚ್ ಗಳಲ್ಲಿ ಪ್ರತಿ ನಿತ್ಯ ಹೆಚ್ಚುವರಿ ಸಿಬಂದಿ ನಿಯೋಜಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Moral Policing in Mangalore at Panambur Beach, Four ram sena activist arrested. A Bangalore based Hindu girl was found with Kerala Muslim youth after which Ram Sena members have assulted them.
06-01-26 12:57 pm
Bangalore Correspondent
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
ಕೇಂದ್ರ ಸಚಿವ ಸೋಮಣ್ಣ ಎದುರಲ್ಲೇ ಬಿಜೆಪಿ- ಕಾಂಗ್ರೆಸ್...
05-01-26 08:17 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 04:09 pm
Mangalore Correspondent
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm