ಬ್ರೇಕಿಂಗ್ ನ್ಯೂಸ್
07-02-24 01:39 pm Mangalore Correspondent ಕ್ರೈಂ
ಪುತ್ತೂರು, ಫೆ.7: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಉಪ್ಪಿನಂಗಡಿಯ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಶಾಖೆಯಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವ ಆರೋಪಿಗಳು ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯಲ್ಲೂ ವಂಚಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಸೆಬಾಸ್ಟಿಯನ್ ಜ.30ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖೆಗೆ ಬಂದು ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದ 30.200 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನ ಇರಿಸಿ 1.35 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಸಂಘದ ಆಲಂಕಾರು ಶಾಖಾ ಪ್ರಬಂಧಕಿ ರೇವತಿ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡ್ಯಾನಿಶ್ ಜ.27ರಂದು ನೆಲ್ಯಾಡಿಯ ಕಾಮಧೇನು ಮಹಳಾ ಸಹಕಾರಿ ಸಂಘದಲ್ಲಿ 30 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನವಿರಿಸಿ 1.40 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಆರೋಪಿಗಳು ಜ.31ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಗೆ ಬಂದು 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನ ಇರಿಸಿ 1.70 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದಾಗಿ ಶಾಖಾ ವ್ಯವಸ್ಥಾಪಕಿ ಕಮನ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇನ್ನಷ್ಟು ಸಹಕಾರ ಸಂಘಗಳಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವಂಚಿಸಿರುವ ಸಾಧ್ಯತೆಯಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಷಯ ಹೊರ ಬರುತ್ತಿದ್ದಂತೆ ಕೆಲವು ಸೊಸೈಟಿಯವರು ತಮ್ಮಲ್ಲಿಯೂ ವಂಚನೆ ಎಸಗಿರುವ ಬಗ್ಗೆ ದೂರು ಹಿಡಿದು ಮುಂದೆ ಬಂದಿದ್ದಾರೆ.
Kadaba Fake gold pledge to banks for laon, two from kerala arrested.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm