ಬ್ರೇಕಿಂಗ್ ನ್ಯೂಸ್
07-02-24 01:39 pm Mangalore Correspondent ಕ್ರೈಂ
ಪುತ್ತೂರು, ಫೆ.7: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಉಪ್ಪಿನಂಗಡಿಯ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಶಾಖೆಯಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವ ಆರೋಪಿಗಳು ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯಲ್ಲೂ ವಂಚಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಸೆಬಾಸ್ಟಿಯನ್ ಜ.30ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖೆಗೆ ಬಂದು ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದ 30.200 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನ ಇರಿಸಿ 1.35 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಸಂಘದ ಆಲಂಕಾರು ಶಾಖಾ ಪ್ರಬಂಧಕಿ ರೇವತಿ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡ್ಯಾನಿಶ್ ಜ.27ರಂದು ನೆಲ್ಯಾಡಿಯ ಕಾಮಧೇನು ಮಹಳಾ ಸಹಕಾರಿ ಸಂಘದಲ್ಲಿ 30 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನವಿರಿಸಿ 1.40 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಆರೋಪಿಗಳು ಜ.31ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಗೆ ಬಂದು 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನ ಇರಿಸಿ 1.70 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದಾಗಿ ಶಾಖಾ ವ್ಯವಸ್ಥಾಪಕಿ ಕಮನ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇನ್ನಷ್ಟು ಸಹಕಾರ ಸಂಘಗಳಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವಂಚಿಸಿರುವ ಸಾಧ್ಯತೆಯಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಷಯ ಹೊರ ಬರುತ್ತಿದ್ದಂತೆ ಕೆಲವು ಸೊಸೈಟಿಯವರು ತಮ್ಮಲ್ಲಿಯೂ ವಂಚನೆ ಎಸಗಿರುವ ಬಗ್ಗೆ ದೂರು ಹಿಡಿದು ಮುಂದೆ ಬಂದಿದ್ದಾರೆ.
Kadaba Fake gold pledge to banks for laon, two from kerala arrested.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm