ಬ್ರೇಕಿಂಗ್ ನ್ಯೂಸ್
08-02-24 09:39 pm Mangalore Correspondent ಕ್ರೈಂ
ಮಂಗಳೂರು, ಫೆ.8: ಕಾವೂರು ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಸಂತೋಷ್ ಸಿಜೆ ಎಂಬ ಸಿಬಂದಿ ದೂರು ಹೇಳಿಕೊಂಡು ಬಂದ ಮಹಿಳೆಯೊಬ್ಬರಿಗೆ ಅಸಹ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಕರ್ತವ್ಯದಿಂದ ಸಸ್ಪೆಂಡ್ ಮಾಡಿದ್ದಾರೆ.
ಜನಸಾಮಾನ್ಯರ ದೂರು ಆಲಿಸುವ ಸ್ಥಾನದಲ್ಲಿರುವ ಪೊಲೀಸ್ ಸಿಬಂದಿಯೇ ಹಲವು ಸಮಯದಿಂದ ಮಹಿಳೆಯ ಮೊಬೈಲ್ ನಂಬರ್ ಪಡೆದು ಅಸಭ್ಯ ರೀತಿಯಲ್ಲಿ ಮೆಸೇಜ್ ಕಳಿಸುತ್ತಿದ್ದುದಲ್ಲದೆ, ಮಾನಸಿಕ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದಿದ್ದ ಮಹಿಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ಹೇಳಿಕೊಂಡಿದ್ದರು. ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಂತೋಷ್ ಕರೆ ಮಾಡಿ, ಧಮಕಿ ಹಾಕಿರುವ ಆಡಿಯೋ ರೆಕಾರ್ಡ್ ಆಗಿದ್ದು, ಅದನ್ನೂ ಪೊಲೀಸ್ ಕಮಿಷನರ್ ಗೆ ನೀಡಿದ್ದಾರೆ. ಅಲ್ಲದೆ, ರಾತ್ರಿ ವೇಳೆ ತನ್ನ ಕಾರನ್ನು ಅಡ್ಡಗಟ್ಟಿ ಕಿರುಕುಳ ನೀಡಿರುವುದನ್ನೂ ಪೊಲೀಸ್ ಹಿರಿಯಧಿಕಾರಿಗಳ ಗಮನಕ್ಕೆ ಮಹಿಳೆ ತಂದಿದ್ದಾರೆ. ನೀನು ಪೊಲೀಸ್ ದೂರು ಕೊಟ್ಟರೆ, ನಿನ್ನ ಕುಟುಂಬವನ್ನು ಮುಗಿಸುತ್ತೇನೆ. ಇಡೀ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆಂದು ಮಹಿಳೆಯನ್ನು ಬೆದರಿಸಿದ್ದಾಗಿ ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆಡಿಯೋ ಮತ್ತು ವಾಟ್ಸಪ್ ಸಂದೇಶಗಳನ್ನು ನೋಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಮೇಲ್ನೋಟಕ್ಕೆ ಅಪರಾಧ ಸಂಜ್ಞೆ ಕಂಡಿದ್ದರಿಂದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ, ಕೃತ್ಯದ ಬಗ್ಗೆ ತನಿಖೆ ಕೈಗೊಂಡು ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಆದೇಶ ಮಾಡಿದ್ದಾರೆ. ಅಮಾನತು ಆದೇಶಕ್ಕೊಳಗಾದ ಸಿಬಂದಿ ಸಂತೋಷ್ ಅದನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕರ ಮೂಲಕ ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿಗಳಿದ್ದು, ಅದಕ್ಕಾಗಿ ಮಹಿಳೆಯಿಂದ ದೂರು ಹಿಂಪಡೆಯುವಂತೆ ಪ್ರಯತ್ನಿಸಿದ್ದಾರೆ ಎನ್ನುವ ಮಾತೂ ಕೇಳಿಬಂದಿದೆ.
Mangalore Kavoor Police Constable Santosh suspended over sexual harrasment to women. Santosh was textinf incident text messages to Women who had come to file a complaint at the station. Police commissioner Anupam Agarwal has suspended santosh soon after the incident came to light.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm