ಬ್ರೇಕಿಂಗ್ ನ್ಯೂಸ್
08-02-24 09:39 pm Mangalore Correspondent ಕ್ರೈಂ
ಮಂಗಳೂರು, ಫೆ.8: ಕಾವೂರು ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಸಂತೋಷ್ ಸಿಜೆ ಎಂಬ ಸಿಬಂದಿ ದೂರು ಹೇಳಿಕೊಂಡು ಬಂದ ಮಹಿಳೆಯೊಬ್ಬರಿಗೆ ಅಸಹ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಕರ್ತವ್ಯದಿಂದ ಸಸ್ಪೆಂಡ್ ಮಾಡಿದ್ದಾರೆ.
ಜನಸಾಮಾನ್ಯರ ದೂರು ಆಲಿಸುವ ಸ್ಥಾನದಲ್ಲಿರುವ ಪೊಲೀಸ್ ಸಿಬಂದಿಯೇ ಹಲವು ಸಮಯದಿಂದ ಮಹಿಳೆಯ ಮೊಬೈಲ್ ನಂಬರ್ ಪಡೆದು ಅಸಭ್ಯ ರೀತಿಯಲ್ಲಿ ಮೆಸೇಜ್ ಕಳಿಸುತ್ತಿದ್ದುದಲ್ಲದೆ, ಮಾನಸಿಕ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದಿದ್ದ ಮಹಿಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ಹೇಳಿಕೊಂಡಿದ್ದರು. ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಂತೋಷ್ ಕರೆ ಮಾಡಿ, ಧಮಕಿ ಹಾಕಿರುವ ಆಡಿಯೋ ರೆಕಾರ್ಡ್ ಆಗಿದ್ದು, ಅದನ್ನೂ ಪೊಲೀಸ್ ಕಮಿಷನರ್ ಗೆ ನೀಡಿದ್ದಾರೆ. ಅಲ್ಲದೆ, ರಾತ್ರಿ ವೇಳೆ ತನ್ನ ಕಾರನ್ನು ಅಡ್ಡಗಟ್ಟಿ ಕಿರುಕುಳ ನೀಡಿರುವುದನ್ನೂ ಪೊಲೀಸ್ ಹಿರಿಯಧಿಕಾರಿಗಳ ಗಮನಕ್ಕೆ ಮಹಿಳೆ ತಂದಿದ್ದಾರೆ. ನೀನು ಪೊಲೀಸ್ ದೂರು ಕೊಟ್ಟರೆ, ನಿನ್ನ ಕುಟುಂಬವನ್ನು ಮುಗಿಸುತ್ತೇನೆ. ಇಡೀ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆಂದು ಮಹಿಳೆಯನ್ನು ಬೆದರಿಸಿದ್ದಾಗಿ ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆಡಿಯೋ ಮತ್ತು ವಾಟ್ಸಪ್ ಸಂದೇಶಗಳನ್ನು ನೋಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಮೇಲ್ನೋಟಕ್ಕೆ ಅಪರಾಧ ಸಂಜ್ಞೆ ಕಂಡಿದ್ದರಿಂದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ, ಕೃತ್ಯದ ಬಗ್ಗೆ ತನಿಖೆ ಕೈಗೊಂಡು ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಆದೇಶ ಮಾಡಿದ್ದಾರೆ. ಅಮಾನತು ಆದೇಶಕ್ಕೊಳಗಾದ ಸಿಬಂದಿ ಸಂತೋಷ್ ಅದನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕರ ಮೂಲಕ ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿಗಳಿದ್ದು, ಅದಕ್ಕಾಗಿ ಮಹಿಳೆಯಿಂದ ದೂರು ಹಿಂಪಡೆಯುವಂತೆ ಪ್ರಯತ್ನಿಸಿದ್ದಾರೆ ಎನ್ನುವ ಮಾತೂ ಕೇಳಿಬಂದಿದೆ.
Mangalore Kavoor Police Constable Santosh suspended over sexual harrasment to women. Santosh was textinf incident text messages to Women who had come to file a complaint at the station. Police commissioner Anupam Agarwal has suspended santosh soon after the incident came to light.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm