ಬ್ರೇಕಿಂಗ್ ನ್ಯೂಸ್
10-02-24 05:48 pm Bangalore Correspondent ಕ್ರೈಂ
ಬೆಂಗಳೂರು, ಫೆ.10: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಹೆಸರನ್ನು ಬಳಸಿಕೊಂಡು, ಹತ್ತು ಲಕ್ಷ ರೂ.ಗಳಿಗೆ ಐದು ಲಕ್ಷ ರೂ.ಸಬ್ಸಿಡಿ ನೀಡುವುದಾಗಿ ಜನರಿಗೆ ನಂಬಿಸಿ ಕೋಟ್ಯಂತರ ರೂ. ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಆರೋಪದ ಪ್ರಕರಣ ಆನೇಕಲ್ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಎಂಬವವರು ಈ ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ.
ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಜನರಿಗೆ ವಂಚಿಸಿರುವ ಪವಿತ್ರಾ, ಟ್ರಸ್ಟ್ಗೆ ಆರ್ಬಿಐನಿಂದ 17 ಕೋಟಿ ರೂ. ಬಂದಿರುವುದಾಗಿ ಮೊದಲು ಜನರಿಗೆ ನಂಬಿಸಿದ್ದಾಳೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿ ಇರುವಂತೆ ನಕಲಿ ಪತ್ರ ಸೃಷ್ಟಿಸಿಕೊಂಡು ಅದನ್ನು ತೋರಿಸಿದ್ದಾಳೆ.
ಕಂತೆ ಕಂತೆ ಹಣದ ನೋಟುಗಳ ವೀಡಿಯೊಗಳನ್ನು ಕಳುಹಿಸಿ ಜನರನ್ನು ನಂಬಿಸಿ ಸುಲಭವಾಗಿ ಸಾಲ ಕೊಡುತ್ತೇನೆ. ಒಬ್ಬರಿಗೆ ಹತ್ತು ಲಕ್ಷ ರೂ. ಸಾಲ ನೀಡಿದರೆ ಅದರಲ್ಲಿ ಐದು ಲಕ್ಷ ರೂ. ಸಬ್ಸಿಡಿ ಎಂದು ಹೇಳಿದ್ದಾಳೆ. ಆದರೆ ಸಾಲ ಕೊಡುವುದಕ್ಕೂ ಮೊದಲು ಹಣ ಹೂಡಿಕೆ ಮಾಡಬೇಕು ಎಂದು ತಿಳಿಸಿದ್ದಾಳೆ ಎನ್ನಲಾಗಿದೆ.
ಪವಿತ್ರಾಳ ಮಾತನ್ನು ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಲಕ್ಷಾಂತರ ರೂ.ಗಳನ್ನು ನೀಡಿದ್ದು, ತಿಂಗಳುಗಳು ಕಳೆದರೂ ಸಾಲ ಬಾರದೆ ಇದ್ದಾಗ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಪವಿತ್ರಾ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಮಾಯಸಂದ್ರದ ನಿವಾಸಿ ರತ್ನಮ್ಮ ಎಂಬವರು ಪವಿತ್ರಾ ವಿರುದ್ಧ ವಂಚನೆ ಕುರಿತು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಆರೋಪಿ ಪವಿತ್ರಾ ಹಾಗೂ ಆಕೆಯ ಸಹಚರರಾದ ಪ್ರವೀಣ್, ಯಲ್ಲಪ್ಪ, ಶೀಲಾ, ರುಕ್ಮಿಣಿ, ರಾಧಾ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಮಾರ್ಟಿನ್, ಹೇಮಲತಾ, ಶಾಲಿನಿ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
In yet another scam, a woman from Tamil Nadu has deceived numerous people, extracting lakhs of rupees under the guise of providing loans. Pavitra, a resident of Hosur, is the prime accused in this fraud, which exploited the name of Union Finance Minister Nirmala Sitharaman and purported affiliations with the Reserve Bank of India (RBI).
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm