ಬ್ರೇಕಿಂಗ್ ನ್ಯೂಸ್
10-02-24 05:48 pm Bangalore Correspondent ಕ್ರೈಂ
ಬೆಂಗಳೂರು, ಫೆ.10: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಹೆಸರನ್ನು ಬಳಸಿಕೊಂಡು, ಹತ್ತು ಲಕ್ಷ ರೂ.ಗಳಿಗೆ ಐದು ಲಕ್ಷ ರೂ.ಸಬ್ಸಿಡಿ ನೀಡುವುದಾಗಿ ಜನರಿಗೆ ನಂಬಿಸಿ ಕೋಟ್ಯಂತರ ರೂ. ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಆರೋಪದ ಪ್ರಕರಣ ಆನೇಕಲ್ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಎಂಬವವರು ಈ ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ.
ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಜನರಿಗೆ ವಂಚಿಸಿರುವ ಪವಿತ್ರಾ, ಟ್ರಸ್ಟ್ಗೆ ಆರ್ಬಿಐನಿಂದ 17 ಕೋಟಿ ರೂ. ಬಂದಿರುವುದಾಗಿ ಮೊದಲು ಜನರಿಗೆ ನಂಬಿಸಿದ್ದಾಳೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿ ಇರುವಂತೆ ನಕಲಿ ಪತ್ರ ಸೃಷ್ಟಿಸಿಕೊಂಡು ಅದನ್ನು ತೋರಿಸಿದ್ದಾಳೆ.
ಕಂತೆ ಕಂತೆ ಹಣದ ನೋಟುಗಳ ವೀಡಿಯೊಗಳನ್ನು ಕಳುಹಿಸಿ ಜನರನ್ನು ನಂಬಿಸಿ ಸುಲಭವಾಗಿ ಸಾಲ ಕೊಡುತ್ತೇನೆ. ಒಬ್ಬರಿಗೆ ಹತ್ತು ಲಕ್ಷ ರೂ. ಸಾಲ ನೀಡಿದರೆ ಅದರಲ್ಲಿ ಐದು ಲಕ್ಷ ರೂ. ಸಬ್ಸಿಡಿ ಎಂದು ಹೇಳಿದ್ದಾಳೆ. ಆದರೆ ಸಾಲ ಕೊಡುವುದಕ್ಕೂ ಮೊದಲು ಹಣ ಹೂಡಿಕೆ ಮಾಡಬೇಕು ಎಂದು ತಿಳಿಸಿದ್ದಾಳೆ ಎನ್ನಲಾಗಿದೆ.
ಪವಿತ್ರಾಳ ಮಾತನ್ನು ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಲಕ್ಷಾಂತರ ರೂ.ಗಳನ್ನು ನೀಡಿದ್ದು, ತಿಂಗಳುಗಳು ಕಳೆದರೂ ಸಾಲ ಬಾರದೆ ಇದ್ದಾಗ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಪವಿತ್ರಾ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಮಾಯಸಂದ್ರದ ನಿವಾಸಿ ರತ್ನಮ್ಮ ಎಂಬವರು ಪವಿತ್ರಾ ವಿರುದ್ಧ ವಂಚನೆ ಕುರಿತು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಆರೋಪಿ ಪವಿತ್ರಾ ಹಾಗೂ ಆಕೆಯ ಸಹಚರರಾದ ಪ್ರವೀಣ್, ಯಲ್ಲಪ್ಪ, ಶೀಲಾ, ರುಕ್ಮಿಣಿ, ರಾಧಾ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಮಾರ್ಟಿನ್, ಹೇಮಲತಾ, ಶಾಲಿನಿ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
In yet another scam, a woman from Tamil Nadu has deceived numerous people, extracting lakhs of rupees under the guise of providing loans. Pavitra, a resident of Hosur, is the prime accused in this fraud, which exploited the name of Union Finance Minister Nirmala Sitharaman and purported affiliations with the Reserve Bank of India (RBI).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am