ಬ್ರೇಕಿಂಗ್ ನ್ಯೂಸ್
16-02-24 07:08 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲು ಎಸೆದಿದ್ದು ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.
ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮಧ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ ಹಳಿಯಲ್ಲಿ ನಿಂತು ಹಳಿಗಳಲ್ಲಿದ್ದ ಜಲ್ಲಿ ಕಲ್ಲುಗಳನ್ನ ರಸ್ತೆಗೆ ಎಸೆಯಲಾರಂಭಿಸಿದ್ದಾನೆ. ಸಾರ್ವಜನಿಕರು, ಶಾಲಾ ಮಕ್ಕಳು ತೆರಳುತ್ತಿದ್ದ ರಸ್ತೆಗೆ ಕಲ್ಲೆಸೆಯುತ್ತಿದ್ದುದನ್ನ ಪ್ರಶ್ನಿಸಿ, ತಡೆಯಲು ಮುಂದಾದ ಸ್ಥಳೀಯ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ತಲೆ ಮತ್ತು ಕೈಗೆ ಪಕ್ಕದ ಅಂಗಡಿಯಲ್ಲಿದ್ದ ಸೋಡಾ ಬಾಟಲಿಯಿಂದ ಮಿಸ್ತ ಹಲ್ಲೆಗೈದಿದ್ದಾನೆ. ಕೂಡಲೇ ಅಲ್ಲಿ ನೆರೆದಿದ್ದ ಸಾರ್ವಜನಿಕರು ಧಾಂದಲೆ ನಡೆಸುತ್ತಿದ್ದ ಮಿಸ್ತಾನನ್ನ ಹಿಡಿದು ಥಳಿಸಿ ಉಳ್ಳಾಲ ಪೊಲೀಸರಿಗೊಪ್ಪಿಸಿದ್ದಾರೆ.
ಸೋಡಾ ಬಾಟಲಿ ಏಟಿನಿಂದ ತಲೆ ಮತ್ತು ಕೈಗೆ ಹಲ್ಲೆಗೊಳಗಾದ ರಾಜೇಶ್ ಶೆಟ್ಟಿ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಿಸ್ತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿದ್ದು ಆತನ ವಿರುದ್ಧ ಸೂಕ್ತ ಕ್ರಮಕ್ಕಾಗಿ ರಾಜೇಶ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆ, ಕೇಂದ್ರ ಬಸ್ಸು ನಿಲ್ದಾಣದ ಹಿಂದಿನ ಪ್ರದೇಶ ಸೇರಿದಂತೆ ಅನೇಕ ನಿರ್ಜನ ಪ್ರದೇಶಗಳಲ್ಲಿ ಯುವಕರು ಸಾಮೂಹಿಕವಾಗಿ ಮಾದಕ ಪದಾರ್ಥಗಳನ್ನ ಸೇವಿಸುತ್ತಿದ್ದು ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Mangalore Ganja addict attacks man with bottle at Thokottu. Rajesh Shetty was Attacked with stones. Druggi Mohammed Mushtaq thrashed by localites and handed over to police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm