ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm